Spread the love

ಕಾರವಾರ: ಅಂಕೋಲಾ ಪಟ್ಟಣದಲ್ಲಿ ಕಾಂಗ್ರೆಸ್ ಮುಖಂಡ ಗೋಪಾಲಕೃಷ್ಣ ನಾಯಕ ಹತ್ಯೆ ಯತ್ನ ನಡೆದಿರುವ ಬಗ್ಗೆ ಮಾಜಿ ಶಾಸಕಿ, ರಾಜ್ಯ ಬಿಜೆಪಿ ಉಪಾಧ್ಯಕ್ಷೆ ರೂಪಾಲಿ ನಾಯ್ಕ ಖಂಡನೆ ವ್ಯಕ್ತಪಡಿಸಿದ್ದಾರೆ.

ಕಾರವಾರ-ಅಂಕೋಲಾ ಕ್ಷೇತ್ರ ಶಾಂತಿ ಸುವ್ಯವಸ್ಥೆಗೆ ಹೆಸರಾಗಿದ್ದ ಕ್ಷೇತ್ರವಾಗಿದೆ. ಇಂತಹ ಕ್ಷೇತ್ರದಲ್ಲಿ ರಾಜಕೀಯ ಮುಖಂಡರ ಹತ್ಯೆಗೆ ಯತ್ನ ಮಾಡಿರುವುದು ಖಂಡನೀಯ. ಸಾಮಾಜಿಕ ಕ್ಷೇತ್ರದಲ್ಲಿ ಇರುವವರನ್ನ ಗುರಿಯಾಗಿಸಿಕೊಂಡು ಹತ್ಯೆ ಯತ್ನ ಮಾಡಿರುವುದು ಒಳ್ಳೆಯ ಬೆಳವಣಿಗೆಯಲ್ಲ. ಈ ಪ್ರಕರಣವನ್ನು ಗೃಹ ಇಲಾಖೆ, ಜಿಲ್ಲಾ ಪೊಲೀಸರು ಗಂಭೀರವಾಗಿ ತೆಗೆದುಕೊಳ್ಳಬೇಕು. ಆರೋಪಿಗಳ ಬಂಧನದ ಜೊತೆಗೆ ಹತ್ಯೆಗೆ ಸುಪಾರಿ ನೀಡಿದವರನ್ನೂ ಸಹ ಪತ್ತೆ ಹಚ್ಚಿ ಕಾನೂನು ಕ್ರಮ ಕೈಗೊಳ್ಳುವ ಮೂಲಕ ಮುಂದೆ ಇಂತಹ ಘಟನೆ ಆಗದಂತೆ ಕ್ರಮ ಕೈಗೊಳ್ಳಬೇಕು ಎಂದು ರೂಪಾಲಿ ನಾಯ್ಕ ಆಗ್ರಹಿಸಿದ್ದಾರೆ.

Leave a Reply

Your email address will not be published. Required fields are marked *