ಅಂಕೋಲಾ: ಹೊನ್ನಾವರ ಟೊಂಕಾ ಹಾಗೂ ಅಂಕೋಲಾ ಕೇಣಿ ಬಂದರು ಕಾಮಗಾರಿ ಹಿನ್ನೆಲೆಯಲ್ಲಿ ಸ್ಥಳೀಯ ಮೀನುಗಾರರು ಪ್ರತಿಭಟನೆ ನಡೆಸುತ್ತಿದ್ದು, ಮೀನುಗಾರಿಗೆ ಕೆಲವು ಪಟ್ಟಭದ್ರ ಹಿತಾಸಕ್ತಿಗಳು ತಪ್ಪು ಸಂದೇಶ ರವಾನಿಸುತ್ತಿದ್ದಾರೆ ಅಂತವರ ಮೇಲೆ ಪೊಲೀಸ್ ಇಲಾಖೆ ಹದ್ದಿನ ಕಣ್ಣಿಟ್ಟಿದ್ದು, ಅಂತವರ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳುವಂತೆ ಪೊಲೀಸ್ ವರಿಷ್ಠಾಧಿಕಾರಿ ಎಂ ನಾರಾಯಣ್ ಖಡಕ್ ಸೂಚನೆ ನೀಡಿದ್ದಾರೆ ಎನ್ನಲಾಗಿದೆ.

ಹೌದು….ಬಂದರು ಕಾಮಗಾರಿಯಿಂದ ಅಷ್ಟು ಮನೆ ಹೋಗಲಿದೆ,ಇಷ್ಟು ಭೂಮಿ ಕಸಿದುಕೊಳ್ಳಲಿದ್ದಾರೆ,ಪರಿಹಾರ ಸಿಗುವುದಿಲ್ಲ ಹೀಗೆ ಇನ್ನಿತರ ಸುಳ್ಳು ಸುದ್ದಿಗಳನ್ನು ಶೋಷಿಯಲ್ ಮೀಡಿಯಾ, ವಾಟ್ಸಾಪ್ ಗ್ರೂಪ್ ಗಳಲ್ಲಿ ಹರಿಬಿಡಲಾಗುತ್ತಿದೆ,ಹಾಗೆಯೇ ಪ್ರತಿಭಟನಾ ನಿರತರಿಗೆ ತಪ್ಪು ಸಂದೇಶ ನೀಡುತ್ತಿರುವುದು ಕಂಡುಬಂದಿದೆ ಇಂತವರ ವಿರುದ್ಧ ಎಸ್ಪಿ ಎಂ ನಾರಾಯಣ್ ಖಡಕ್ ವಾರ್ನಿಂಗ್ ನೀಡಿದ್ದು ಶೋಷಿಯಲ್ ಮೀಡಿಯಾ ಹಾಗೂ ಇನ್ನಿತರ ಮಾರ್ಗವಾಗಿ ತಪ್ಪು ಸಂದೇಶ ರವಾನಿಸುತ್ತಿರುವವರ ವಿರುದ್ಧ ತಕ್ಷಣ ಎಫ್ ಐ ಆರ್ ದಾಖಲಿಸುವಂತೆ ಸೂಚನೆ ನೀಡಿದ್ದಾರೆ ಎನ್ನಲಾಗಿದೆ.

ಹಾಗೆಯೇ ಸುಳ್ಳು ಮಾಹಿತಿ ನೀಡಿ ಪ್ರತಿಭಟನೆಗೆ ಪ್ರಚೋದನೆ ನೀಡುತ್ತಿರುವ 150 ಕ್ಕೂ ಅಧಿಕ ಮಂದಿಯನ್ನು ಗುರುತಿಸಲಾಗಿದ್ದು, ಅವರ ವಿರುದ್ಧ ಕ್ರಮ ಕೈಗೊಳ್ಳಲಿದ್ದಾರೆ ಎನ್ನಲಾಗಿದೆ.


Leave a Reply